Sunday, May 30, 2010

Vishnu Sahasranama 8 to 15

ಭೂತಾತ್ಮಾ ಭೂತಭಾವನಃ

ಪೂತಾತ್ಮಾ ಪರಮಾತ್ಮಾ ಚ ಮುಕ್ತಾನಾಂ ಪರಮಾ ಗತಿಃ

ಅವ್ಯಯಃ ಪುರುಷಃ ಸಾಕ್ಷೀ

8)ಭೂತಾತ್ಮಾ

ಪಂಚಭೂತಗಳಲ್ಲಿ ವ್ಯಾಪಿಸಿದವ, ಬ್ರಹ್ಮಾಂಡದಲ್ಲಿ ವ್ಯಾಪಿಸಿದವ, ಪಿಂಡಾ0ಡದಲ್ಲಿ ತುಂಬಿರುವವ,ಎಲ್ಲಾ ಜೀವದಲ್ಲಿ ಅಂತರ್ಯಾಮಿ ಆಗಿ ತುಂಬಿರುವವ.ಭೂತಿಯನ್ನು( ಉನ್ನತಿ) ಹೊಂದಿದ ಜೀವಿಗಳಿಗೆ ಮುಕ್ತಿಯನ್ನು ಕರುಣಿಸುವವ ಭೂತಾತ್ಮಾ.

9)ಭೂತಭಾವನಃ

ಸೃಷ್ಟಿ-ಸ್ಥಿತಿ-ಸoಹಾರಗಳಿಗೆ ಕಾರಣವಾದವ ,ಜೀವಿಗಳಿಗೆ ಸುಖ-ದುಃಖ ಕೊಡುವವ ಭೂತಭಾವನಃ.

10)ಪೂತಾತ್ಮಾ 11)ಪರಮಾತ್ಮಾ

ಆತ್ಮ- ಅಂದರೆ ->ದೇಹ ? ಅಲ್ಲ !!! ಭಾವನೆಗಳ ಗೂಡಾದ ಮನಸ್ಸು? ಅಲ್ಲ !! ಏಕೆಂದರೆ ಮನಸ್ಸಿನಿಂದ ಯೋಚಿಸುವುದರಿಂದ ಮನಸ್ಸನ್ನು ನಿಯಂತ್ರಿಸುವವ ಯಾರು ? ಅದೇ ಜೀವ -ಆತ್ಮ. ಆದರೆ ಈ ಜೀವವನ್ನು ನಿಯಂತ್ರಿಸುವ ಶಕ್ತಿ ಯಾರು ? ಆತನೇ -ಪರಮಾತ್ಮ (ಎಲ್ಲಾ ಆತ್ಮಗಳಿಗೂ ಪರಮವಾದ ಆತ್ಮ)

12)ಮುಕ್ತಾನಾಂ ಪರಮಾ ಗತಿಃ

ಚತುರ್ಮುಖನ ಆಯಸ್ಸು ನೂರು ಕಲ್ಪ.ಒಂದು ಕಲ್ಪ (काल्प/kālpa)ಅಂದರೆ 31 ಸಾವಿರದ 104 ಸಾವಿರ ಕೊಟಿ ವರ್ಷ .ಮಾನವನ ಸಾಧನೆ ಒಂದು ಕಲ್ಪ. ಮುಕ್ತಿ ಸ್ಥಿತಿಯಲ್ಲಿ ಮಾನವನ ಜೊತೆಗೆ ಚತುರ್ಮುಖ ಬ್ರಹ್ಮರು (ಮುಕ್ತಿಯಲ್ಲಿರುವ ಚತುರ್ಮುಖರು) ಮಾರ್ಗದರ್ಶಕನಾಗಿ ಇರುತ್ತಾರೆ.ಮುಕ್ತಾನಾಂ ಪರಮಾ ಗತಿಃ ಅಂದರೆ :ಮುಕ್ತಿ ಪಡೆದವರಿಗೆ ಮುಕ್ತಿಯಲ್ಲೂ ಚತುರ್ಮುಖ ಬ್ರಹ್ಮರೊಂದಿಗೆ -ಶ್ರೇಷ್ಠ ಮಾರ್ಗದರ್ಶನ ಮಾಡುವವನು, ಹಾಗು ಚತುರ್ಮುಖ ಬ್ರಹ್ಮರಿಗೂ -ಶ್ರೇಷ್ಠ ಮಾರ್ಗದರ್ಶನ ಮಾಡುವವನು, ಮತ್ತು ಮುಕ್ತಿ ಪಡೆದ ಎಲ್ಲಾ ಆತ್ಮರಿಗೆ ತಾಯಿಯಾಗಿರುವ ಸ್ತ್ರೀ ತತ್ವ ಚೇತನ-ಲಕ್ಷ್ಮಿಗೂ ಆಶ್ರಯದಾತನಾಗಿರುವವನು.

13)ಅವ್ಯಯಃ(ಆಯ-ವ್ಯಯ)

ಎಲ್ಲಾ ವಸ್ತುವಿನ ಒಳಗಿದ್ದೂ(ಆಯ) ಏಕರೂಪನಾಗಿ ಇರುವವನು (ಆನೆ ಮತ್ತು ಇರುವೆ ಒಳಗೆ ಇರುವ ಭಗವಂತ ಒಬ್ಬನೇ ಬೇರೆ ಬೇರೆ ಅಲ್ಲ )

ವ್ಯಯ ಅಂದರೆ ಕಮ್ಮಿ ಆಗುವುದು ,ಖರ್ಚು ,ನಾಶ ಇತ್ಯಾದಿ...... ಯಾವುದು, ಯಾವ ಕಾಲದಲ್ಲೂ ಕಡಿಮೆ ಆಗದೆ, ನಾಶವಾಗದೆ, ಅನಾದಿ-ಅನಂತ ಕಾಲದಲ್ಲಿ, ಏಕರೂಪನಾಗಿ ಇರುವ ಶಾಶ್ವತ ತತ್ವ .

14)ಪುರುಷಃ ಪುರು+ಷಃ ಇದು ತುಂಬಾ ಪ್ರಮುಖವಾದ ನಾಮ. ವೇದದ ಸಾರಭೂತವಾದ ಪುರುಷ-ಸೂಕ್ತದಲ್ಲಿ ಬರುವಂತಹ ಸೂಕ್ತಗಳ ಪ್ರತಿಫಲದ ರೂಪವೇ ಭಗವಂತನ ಪುರುಷ ನಾಮಕವಾದ ರೂಪ. ಪುರು ಅಂದರೆ ಎಲ್ಲಕ್ಕಿಂತ ದೊಡ್ಡದು ಅನಂತ.

-ಬ್ರಹ್ಮಾಂಡ ರಚನೆ ಆಗುವ ಮುಂಚೆ ಬ್ರಹ್ಮಾಂಡ ಸೃಷ್ಟಿ ಆದ ಮೇಲೂ ಅನಂತವಾಗಿ ತುಂಬಿರುವವ.

-ಪಿಂಡಾ0ಡದಲ್ಲಿ ತುಂಬಿರುವವನು

-ಪುರು+ಷಃ-> ಪುರ ಅಂದರೆ ಪೂರ್ಣತೆ ಹೊಂದಿದ ದೇಹ(perfect body ) ,

ಷಃ ಅಂದರೆ ನೆಲೆಸಿರುವವನು

Note: ಇಲ್ಲಿ ಪುರುಷಃ ಅಂದರೆ ಗಂಡಸು ಅನ್ನುವ ಅರ್ಥ ಕೊಡುವುದಿಲ್ಲ -ಮನುಷ್ಯ ಶರೀರ ಅನ್ನುವ ಅರ್ಥ ಕೊಡುತ್ತದೆ

-ಪುರದಲ್ಲಿ ಇದ್ದು ಅದರ ಒಡೆತನವನ್ನು ಹೊಂದಿರುವ ಹಾಗೂ ಎಲ್ಲಾ ಪುರದ ಒಡೆಯ -ಎಲ್ಲಾ ಪುರದಲ್ಲಿ, ಪುರದ ಹೊರಗೆ ತುಂಬಿ ಅನಂತವಾಗಿರುವ ಪರಮ ಪುರುಷ .

-ಜ್ಞಾನ,ಶಕ್ತಿ,ಭಲ,ಐಶ್ವರ್ಯ,ವೀರ್ಯ,ತೇಜಸ್ಸು ಈ -ಷಟ್ಗುಣಪೂರ್ಣನಾಗಿ ಜಗತ್ತನ್ನು ನಿಯಂತ್ರಿಸುವವ.

ಪು- ಎಲ್ಲವನ್ನು ಪಾವನ ಗೊಳಿಸುವವನು.

ರು- ತಾನು ಒಳಗಿದ್ದು- ಶತ್ತ್ರು , ಅಜ್ಞಾನ, ದುಃಖ ತಡೆದು, ಜೀವವನ್ನು ಉದ್ದಾರ ಮಾಡುವವನು.

ಷಃ- ಎಲ್ಲೆಡೆ ಮಲಗಿದವ (ಮಲಗಿದವ ಅಂದರೆ ಅನಾಯಾಸವಾಗಿ ಎಲ್ಲಾ ಕಾರ್ಯ ಮಾಡುವವ)

15)ಸಾಕ್ಷೀ

-ಎಲ್ಲವನ್ನು ಕಣ್ಣಾರೆ ಕಾಣಬಲ್ಲವ. ಭಗವಂತನ ಮುಂದೆ ನಾವು ಮುಚ್ಚಿಕೊಳ್ಳುವುದು ಏನೂ ಇಲ್ಲ .ಭಗವಂತನ ಮುಂದೆ ನಾವೆಲ್ಲರೂ ಬತ್ತಲು, ಆತನ ಮುಂದೆ ಮುಚ್ಚಿಟ್ಟುಕೊಂಡು ಮಾಡುವ ಯಾವ ಕೆಲಸವೂ ಇಲ್ಲ. ಭಗವಂತನ ಮುಂದೆ ನಾವು ಬತ್ತಲಾಗದೆ ಭಗವಂತ ನಮಗೆ ಎಂದೂ ಬಿಚ್ಚಿಕೊಳ್ಳುವೂದಿಲ್ಲ 

-ಆದುದರಿಂದ ಭಗವಂತ ಎಲ್ಲವನ್ನು ಕಾಣಬಲ್ಲ ಸಾಕ್ಷಿ.

ಅಕ್ಷಿಗಳು ಅಂದರೆ ಇಂದ್ರಿಯ ಉಳ್ಳವರು, ಅಂದರೆ ನಾವು-ನೀವು ; -ಅಕ್ಷಿಗಳ ಸಖನಾಗಿ ನಮ್ಮನ್ನು ಉದ್ದಾರ ಮಾಡುವವನು ಸಾಕ್ಷಿ

No comments:

Post a Comment