Saturday, May 29, 2010

Vishnu Sahasranama 5-7

ಭೂತಕೃದ್ಭೂತಭೃದ್ಭಾವೋ

5) ಭೂತಕೃತ್
ಸಂಸ್ಕೃತದಲ್ಲಿ ಕೃತ್ ಅನ್ನುವ ಪದಕ್ಕೆ ಎರಡು ಅರ್ಥವಿದೆ.
೧. ಸೃಷ್ಟಿ
೨. ಸoಹಾರ
ಅದೇ ರೀತಿ ಭೂತಗಳಲ್ಲಿ ಎರಡು ವಿಧ
೧. ಅಚೇತನ ಭೂತ ಅಂದರೆ ಪಂಚಭೂತಗಳು (ಮಣ್ಣು ,ಬೆಂಕಿ, ನೀರು, ಗಾಳಿ ಮತ್ತು ಆಕಾಶ)
೨. ಚೇತನ ಭೂತ ಅಂದರೆ ಪಂಚಭೂತಗಳಿಂದ ಆದ ಜೀವಗಳು.
ಭೂತಕೃತ್ (ಸೃಷ್ಟಿ) ಅಂದರೆ ಪಂಚಭೂತಗಳ ಸೃಷ್ಟಿಕರ್ತ,ಪಂಚಭೂತಾತ್ಮಕವಾದ ಬ್ರಹ್ಮಾಂಡ ಸೃಷ್ಟಿಕರ್ತ.
ಬ್ರಹ್ಮಾಂಡದಲ್ಲಿ ಪಂಚಭೂತಗಳಿಂದಾದ ಪಿಂಡಾoಡ ಸೃಷ್ಟಿ ಮಾಡಿದವ , ಪಿಂಡಾ0ಡದಲ್ಲಿ ಜೀವವನ್ನು ಇರಿಸಿ ದೇಹ ಸೃಷ್ಟಿ ಮಾಡಿದವ, ಮತ್ತು ಸಾಧನೆ ಮೂಲಕ ಜೀವರಿಗೆ ಮುಕ್ತಿಯನ್ನು ಕರುಣಿಸುವವ.
ಭೂತಕೃತ್ (ಸಂಹಾರ) ಅಂದರೆ ದೇಹ ನಾಶದ ಮೂಲಕ ಜೀವರನ್ನು ನಾಶ ಮಾಡಿದವ, ಅಭಿವೃದ್ದಿ ಹೊಂದದ ತಾಮಸ ಜೀವರನ್ನು ನಾಶ ಮಾಡಿದವ, ಪಂಚಭೂತಾತ್ಮಕವಾದ ಶರೀರ ನಾಶ ಮಾಡಿದವ, ಪಂಚಭೂತಾತ್ಮಕವಾದ ಬ್ರಹ್ಮಾಂಡ ನಾಶ ಮಾಡಿದವ , ಪ್ರಳಯ ಕಾಲದಲ್ಲಿ ಪಂಚಭೂತಗಳನ್ನೂ ನಾಶ ಮಾಡುವವ.
6)ಭೂತಭೃತ್

ಸೃಷ್ಟಿ-ಸ್ಥಿತಿ-ಲಯದಲ್ಲಿ ಪಂಚಭೂತಗಳ ಧಾರಣೆ ಮಾಡಿದವ,ಪಂಚಭೂತಾತ್ಮಕವಾದ ಬ್ರಹ್ಮಾಂಡ ಧಾರಣೆ ಮಾಡಿದವ, ಪಂಚಭೂತಗಳಿಂದಾದ ಪಿಂಡಾ0ಡ ಧಾರಣೆ ಮಾಡಿದವ, ಪಿಂಡಾ0ಡದಲ್ಲಿರುವ ಜೀವವನ್ನು ಧಾರಣೆ ಮಾಡಿದವ ಮತ್ತು ಮುಕ್ತಿಯನ್ನು ಪಡೆದ ಜೀವವನ್ನು ಧಾರಣೆ ಮಾಡಿದವ.
7)ಭಾವಾಯ

ಸೃಷ್ಟಿ-ಸ್ಥಿತಿ-ಲಯ ಇದು ಭಗವಂತನ ಗುಣ. ಆತ ಸಚ್ಚಿದಾನ೦ದ. ಹುಟ್ಟು-ಸಾವು ನೈಸರ್ಗಿಕ ಕ್ರಿಯೆ.
ಸಾವು ಹುಟ್ಟಿನ ಮೂಲ, ಹುಟ್ಟು ಸಾವಿನ ಮೂಲ. ಭಗವಂತ ಎಂದೆಂದಿಗೂ ಶಾಶ್ವತವಾಗಿ ಇರುವವನು.
ಭಾವ ಅಂದರೆ ಸಚ್ಚಿದಾನ೦ದ ಸ್ವರೂಪ.

No comments:

Post a Comment