Monday, June 21, 2010

Vishnu Sahasranama 80-84

ಅನುತ್ತಮೋ ದುರಾಧರ್ಷಃ ಕೃತಜ್ಞಃ ಕೃತಿರಾತ್ಮವಾನ್

80)ಅನುತ್ತಮೋ
ಭಗವಂತನ ಹೆಜ್ಜೆ ಆನೆಯ ಹೆಜ್ಜೆಯಂತೆ. ಇತರ ಎಲ್ಲಾ ಹೆಜ್ಜೆಗಳು ಅದರ ವ್ಯಾಪ್ತಿಯ ಒಳಗೆ ಸೀಮಿತ.
ಅನುತ್ತಮ ಅಂದರೆ ಉತ್ತಮರಲ್ಲಿ ಉತ್ತಮ. ಅವನಿಂದ ಉತ್ತಮರು ಯಾರೂ ಇಲ್ಲ.ಅದ್ದರಿಂದ ಆತ ಅನುತ್ತಮ.
81)ದುರಾಧರ್ಷಃ
ಧರ್ಷಣೆಗೆ ನಿಲುಕದೇ ಇರುವುದು ದುರಾಧರ್ಷ. ಭಗವಂತನನ್ನು ನಲುಗಿಸುವುದು, ವಿಚಲಿತಗೊಳಿಸುವುದು ಅಸ್ಸಾದ್ಯ. ಆತ ತನ್ನ ಕ್ರಮದಿಂದ, ತನ್ನ ತೀರ್ಮಾನದಿಂದ, ತನ್ನ ಸ್ಥಾನದಿಂದ ವಿಚಲಿತಗೋಳ್ಳಲಾರ. ಅದ್ದರಿಂದ ಭಗವಂತ ದುರಾಧರ್ಷ.
82)ಕೃತಜ್ಞಃ
ಮೇಲಿನ ಕೆಲವು ನಾಮಗಳಲ್ಲಿ ನಾವು ಭಗವಂತನಿಗೆ ಕ್ರಮವಿಲ್ಲ, ಅವನ ಕ್ರಮವನ್ನು ಯಾರೂ ಮೀರಲಾರರು, ಅವನು ಅನುತ್ತಮ, ದುರಾಧರ್ಷ ... ಇತ್ಯಾದಿ ಅರ್ಥಗಳನ್ನು ನೋಡಿದೆವು. ಇಗ ನಮ್ಮಲ್ಲಿ ಒಂದು ಪ್ರಶ್ನೆ ಮೂಡಬಹುದು. ಭಗವಂತ ಏಕೆ ಪಕ್ಷಪಾತಿ? ಒಬ್ಬ ಬಡವ, ಒಬ್ಬ ಶ್ರೀಮಂತ,ಒಬ್ಬರಿಗೆ ಸುಖ, ಇನ್ನೊಬ್ಬರಿಗೆ ಕಷ್ಟ ... ಏಕೆ ಹೀಗೆ? ಈ ಪ್ರಶ್ನೆಗೆ ಉತ್ತರವೇ ಕ್ರತಜ್ಞ ನಾಮದ ಅರ್ಥ.
ಕ್ರತಜ್ಞ ಎಂದರೆ ಏನನ್ನೂ ಮರೆಯದೆ ಮರಳಿ ಕೊಡುವವನು ಎಂದರ್ಥ. ನಾವು ಏನನ್ನು ಮಾಡಿದ್ದೆವೂ, ಆ ಕರ್ಮ ಫಲಕ್ಕನುಗುಣವಾಗಿ ಫಲವನ್ನು ಕೊಡುವ ಭಗವಂತ ಕ್ರತಜ್ಞ
83)ಕೃತಿ
ಭಗವಂತನ ಜ್ಞಾನ, ಭಲ, ಕ್ರೀಯೆ ಎಲ್ಲವೂ ಆತನ ಸ್ವರೂಪ ಆದ್ದರಿಂದ ಆತ ಕೃತಿ
84)ಆತ್ಮವಾನ್
ಆತ್ಮದ ಸ್ಥೂಲವಾದ ಅರ್ಥ ಶರೀರ. ಭಗವಂತನಿಗೆ ಮಣ್ಣು, ನೀರು ಮತ್ತು ಬೆಂಕಿಯಿಂದಾದ, ಒಂದು ದಿನ ಬಿದ್ದು ಹೋಗುವ ಶರೀರ ಅಥವಾ ಆಕಾರವಿಲ್ಲ. ಅವನು ವಿಶ್ವಾಕಾರ. ಆತ ಯಾವ ರೂಪದಲ್ಲಿ ಕೂಡ ಕಾಣಿಸಿಕೊಳ್ಳಬಲ್ಲ. ಜ್ಞಾನ ಆತನ ಸ್ವರೂಪ. ಆತ ಎಲ್ಲಾ ಆತ್ಮರ ತಂದೆ. ಆದ್ದರಿಂದ ಭಗವಂತ ಆತ್ಮವಾನ್.

1 comment: