Tuesday, June 22, 2010

Vishnu Sahasranama 85-89

ಸುರೇಶಃ ಶರಣಂ ಶರ್ಮ ವಿಶ್ವರೇತಾಃ ಪ್ರಜಾಭವಃ
85)ಸುರೇಶಃ

ಸುರರು ಅಂದರೆ ದೇವತೆಗಳು. ಭಗವಂತ ಸುರರ-ಈಶ ಆದ್ದರಿಂದ ಆತ ಸುರೇಶ.
86)ಶರಣಂ
ಶರಣು ಅಂದರೆ ಮೂಲತಃ ಆಶ್ರಯ ಅನ್ನುವ ಅರ್ಥವನ್ನು ಕೊಡುತ್ತದೆ. ಆದರೆ ವಾಡಿಕೆಯಲ್ಲಿ ಈ ಅರ್ಥ ತಪ್ಪಿಹೋಗಿ ವಿಪರೀತ ಅರ್ಥದಲ್ಲಿ ಪ್ರಚಲಿತದಲ್ಲಿದೆ. ಮೂಲ ಅರ್ಥದ ಪ್ರಕಾರ ದೇವರು ನಮಗೆ ಶರಣು ಹೊರತು ನಾವು ದೇವರಿಗೆ ಶರಣಾಗಲು ಸಾದ್ಯವಿಲ್ಲ. ಅಂದರೆ ದೇವರೇ ನಮಗೆ ಆಶ್ರಯದಾತನೇ ಹೊರತು ನಾವು ದೇವರಿಗೆ ಆಶ್ರಯದಾತರಾಗಲು ಸಾದ್ಯವಿಲ್ಲ. ಆದ್ದರಿಂದ ಎಲ್ಲಾ ಜೀವ ಜಂತುಗಳಿಗೂ ಆಶ್ರಯದಾತನಾದ ಭಗವಂತ ಶರಣು.
87)ಶರ್ಮ
ಶರ್ಮ ಅಂದರೆ ಆನಂದ. ಜ್ಞಾನಾನಂದಮಯನಾದ ಭಗವಂತ ಎಂದರ್ಥ.
88)ವಿಶ್ವರೇತಾಃ
ಭಗವಂತನ ರೇತಸ್ಸಿನಿಂದ ಈ ವಿಶ್ವ ಸೃಷ್ಟಿಯಾದ್ದರಿಂದ ಆತನನ್ನು ವಿಶ್ವರೇತಾ ಎನ್ನುವುದು ಮೇಲ್ನೋಟಕ್ಕೆ ಕಾಣುವ ಅರ್ಥ. ಆದರೆ ಈ ನಾಮಕ್ಕೆ ಇನ್ನೂ ಹೆಚ್ಚಿನ ಅರ್ಥವಿದೆ.
ರೇತನ್ ಅಂದರೆ ಆನಂದ ರೂಪ ಎಂದರ್ಥ. ವಿಶ್ವರೇತಾ ಎಂದರೆ ಜೀವಕೂಟಿಯ ಆನಂದದಲ್ಲಿ ಪರಿಪೂರ್ಣ ಆನಂದ ರೂಪ ಎಂದರ್ಥ. ರೇತಸ್ಸು ಅಂದರೆ ಸಾರಭೂತವಾದದ್ದು ಎನ್ನುವ ಅರ್ಥವನ್ನೂ ಕೊಡುತ್ತದೆ. ಆದ್ದರಿಂದ ಇಡೀ ಬ್ರಹ್ಮಾಂಡದಲ್ಲಿ ಸಾರಭೂತನಾಗಿರುವ ಭಗವಂತ ವಿಶ್ವರೇತಾ
89)ಪ್ರಜಾಭವಃ
ಧರ್ಮದ ಮಾರ್ಗದಲ್ಲಿ, ಜ್ಞಾನದ ಹಸಿವಿನಿಂದ, ಭಗವಂತನಲ್ಲಿ ಶರಣುಕೂರಿ ಬಂದ ಭಕ್ತರನ್ನು ಇಲ್ಲಿ ಪ್ರಜಾ ಎಂದು ಕರೆದಿದ್ದಾರೆ. ಭವ ಅಂದರೆ ಆನಂದವನ್ನು ದಯಪಾಲಿಸುವುದು ಎಂದರ್ಥ.
ಆದ್ದರಿಂದ ಪ್ರಜಾಭವ ಅಂದರೆ ಧರ್ಮ ಮತ್ತು ಜ್ಞಾನ ಮಾರ್ಗದಲ್ಲಿರುವವರಿಗೆ ಆನಂದಪ್ರದನಾದ ಭಗವಂತ ಎಂದರ್ಥ.

2 comments:

  1. hey,nice site,if u r interested view my site als,it's........fordevotees.blogspot.com

    ReplyDelete