ವಿಷ್ಣು ಸಹಸ್ರನಾಮ: ಅಚ್ಯುತಃ...
319) ಅಚ್ಯುತಃ
ಭಗವಂತನ ಈ ನಾಮ ಸಹಸ್ರನಾಮದಲ್ಲಿ ಮೂರು ಭಾರಿ ಪುನರುಕ್ತಿಯಾಗಿದೆ (100,319 ಹಾಗೂ 556). ನಮ್ಮಲ್ಲಿ ಯಾವುದೇ ಮಂತ್ರ, ಜಪ ಪಾರಾಯಣ ಮಾಡಿ ಮುಗಿಸಿದ ಮೇಲೆ ಸ್ವರ-ವರ್ಣದ ಲೋಪದ ಪ್ರಾಯಶ್ಚಿತಕ್ಕಾಗಿ ಹೇಳುವ ಪ್ರಾಯಶ್ಚಿತ ಮಂತ್ರದಲ್ಲಿನ ಮೂರು ನಾಮಗಳಲ್ಲಿ ಈ ನಾಮವೂ ಒಂದು ‘ಅಚ್ಯುತಾಯ ನಮಃ ಅನಂತಾಯ ನಮಃ ಗೋವಿಂದಾಯ ನಮಃ ಅಚ್ಯುತಾನಂತ ಗೋವಿಂದೇಭ್ಯೋ ನಮಃ’ ಚ್ಯುತಿ ಇಲ್ಲದ ಅಚ್ಚುತ ನಾಮಕ ಭಗವಂತ ನಮ್ಮ ಸರ್ವಉಚ್ಚಾರ ದೋಷಹರ. ಇಷ್ಟೇ ಅಲ್ಲದೆ ಪುರಾಣದಲ್ಲಿ ವೇದವ್ಯಾಸರು ಹೇಳಿದಂತೆ :
"ಅಚ್ಯುತಾನಂತ ಗೋವಿಂದ ನಾಮೋಚ್ಚಾರಣ ಬೀಶಿತಾಃ ನಶ್ಯಂತಿ ಸಕಲಾಃ ರೋಗಾಃ ಸತ್ಯಂ ಸತ್ಯಂವದಾಮ್ಯಹಂ" ಎಂದರೆ ಭಗವಂತನ ಈ ನಾಮೋಚ್ಚಾರಣೆಯಿಂದ ಸರ್ವ ರೋಗಗಳು ಹೆದರಿ ಬಿಟ್ಟೋಡುತ್ತವೆ ಇದು ಸತ್ಯ. ಇದಕ್ಕಾಗಿ ನಮಗೆ ಭಗವಂತನಲ್ಲಿ ಅಗಾಧವಾದ ನಂಬಿಕೆ(Involvement) ಹಾಗು ಸ್ವೀಕರಿಸುವ ಸಾಮರ್ಥ್ಯ(Receiving Power) ಬೇಕು. ಪರಿಪೂರ್ಣನಾದ ಭಗವಂತ ಸರ್ವ ರೋಗಹರ. ಹೀಗೆ ಸ್ವಯಂ ಚ್ಯುತಿ ಇಲ್ಲದ, ಭಕ್ತರ ಚ್ಯುತಿಯನ್ನು ಹರಣ ಮಾಡುವ ಭಗವಂತ ಅಚ್ಯುತಃ.
No comments:
Post a Comment