Monday, September 6, 2010
Vishnu Sahasranama 324-325
ಅಪಾಂ ನಿಧಿರಧಿಷ್ಠಾನಮಪ್ರಮತ್ತಃ.......
324) ಅಪಾಂನಿಧಿಃ
ಅಪಾಂನಿಧಿಃ ಎಂದರೆ "ನೀರಿನ ನೆಲೆ". ನೀರಿನ ನೆಲೆಯಾದ ಕಡಲಿನಲ್ಲಿ, ಕಡಲಿನ ದೇವತೆಯಾದ ವರುಣನಲ್ಲಿ, ಸಮಸ್ತ ಜಲರಾಶಿಯಲ್ಲಿ ಸನ್ನಿಹಿತನಾದ ಭಗವಂತ ಅಪಾಂನಿಧಿಃ. 'ಆಪ್' ಎಂದರೆ ಪಾನ ಮಾಡುವ ವಸ್ತು. ನಾವು ಬದುಕುವುದಕ್ಕೊಸ್ಕರ ಪಾನ ಮಾಡುವ ವಸ್ತು 'ನೀರು'. ಜ್ಞಾನಿಗಳು ಸದಾ ಪಾನ(ಶ್ರವಣ) ಮಾಡುವ ವಸ್ತು ಭಗವಂತನ 'ಅನಂತ ಗುಣ'. ಅನಂತ ಗುಣಗಳ ನೆಲೆ ಭಗವಂತನೋಬ್ಬನೆ. ಇನ್ನು ನಾವು ಮಾಡುವ ಸತ್ಕರ್ಮ ಕೊನೆಗೆ ಸೇರುವುದು ಭಗವಂತನನ್ನು. ಇದಕ್ಕಾಗಿ ಪ್ರತೀ ಪೂಜೆಯ ಕೊನೆಗೆ "ಕೃಷ್ಣಾರ್ಪಣ ಮಸ್ತು" ಎನ್ನುತ್ತೇವೆ. ಆದ್ದರಿಂದ ಸರ್ವ ಸತ್ಕರ್ಮಗಳ ನೆಲೆ ಭಗವಂತ. ಹೀಗೆ ಕರ್ಮಗಳ, ಗುಣಗಳ, ದೇವತೆಗಳ ಹಾಗೂ ನೀರಿನ ನೆಲೆಯಾದ ಭಗವಂತ ಅಪಾಂನಿಧಿಃ.
325) ಅಧಿಷ್ಟಾನಮ್
ಅಧಿಷ್ಟಾನಮ್ ಎಂದರೆ ಎಲ್ಲವುದಕ್ಕೂ ಆಧಾರ. ಪ್ರತಿಯೊಂದು ವಸ್ತುವಿನ ಮೂಲಾಧಾರ ಭಗವಂತ. ಭೂಮಿಯನ್ನು "ಶೇಷ" ಹೊತ್ತಿದ್ದಾನೆ. ಶೇಷನನ್ನು "ವಾಯು" ಹೊತ್ತಿದ್ದಾನೆ, ವಾಯುವಿಗೆ ಪೂರ್ಣಾಧಾರ ಭಗವಂತ. ಹೀಗೆ ಎಲ್ಲ ವಿಶ್ವಕ್ಕು ಆಧಾರವಾದ, ಎಲ್ಲಕ್ಕೂ ಅಧಿಕವಾದ ಸ್ಥಾನದಲ್ಲಿರುವ ಭಗವಂತ ಅಧಿಷ್ಟಾನಮ್.
Labels:
Bannanje,
Vishnu Sahasranamam,
ವಿಷ್ಣು ಸಹಸ್ರನಾಮ ಅರ್ಥ
Subscribe to:
Post Comments (Atom)
No comments:
Post a Comment