ವಿಷ್ಣು ಸಹಸ್ರನಾಮ: ಮನೋಜವಸ್ತೀರ್ಥಕರೋ ವಸುರೇತಾ ವಸುಪ್ರದಃ
694) ಮನೋಜವಃ
ಎಲ್ಲಕ್ಕಿಂತ ವೇಗವಾಗಿ ಹೋಗುವ ವಸ್ತು ಮನಸ್ಸು. ಆದರೆ ಭಗವಂತನ ವೇಗ ಮನಸ್ಸಿನ ವೇಗಕ್ಕಿಂತ ಮಿಗಿಲು. ಇಂತಹ ಭಗವಂತನನ್ನು ತಲುಪಬೇಕಾದರೆ ನಾವು ನಮ್ಮ ಅಹಂಕಾರವನ್ನು ಸಂಪೂರ್ಣವಾಗಿ ಕಳಚಿ ಆತನಲ್ಲಿ ಶರಣಾಗಬೇಕು. ಆಗ ಮಾತ್ರ ನಮ್ಮ ಮನಸ್ಸು ಆತನನ್ನು ಮುಟ್ಟಬಲ್ಲದು.
695) ತೀರ್ಥಕರಃ
ಭಗವಂತನ ಕಡೆಗೆ ಹೋಗಬೇಕಾದರೆ ಹಂತ-ಹಂತವಾಗಿ ಹೋಗಬೇಕು. ಮೊದಲು ನಮ್ಮ ಮನಸ್ಸು ಒಳ್ಳೆಯ ಕಡೆ ಹರಿಯಬೇಕು. ಮನಸ್ಸಿನಲ್ಲಿ ಬೇಡವಾದ ಪ್ರಾಪಂಚಿಕ ವಿಷಯ ತುಂಬಿಕೊಂಡರೆ ನಾವು ಭಗವಂತನತ್ತ ಪ್ರಯಾಣಿಸಲು ಸಾಧ್ಯವಿಲ್ಲ. ಈ ಕಾರಣಕ್ಕಾಗಿ ಭಗವಂತ ದೇವಸ್ತಾನ ಹಾಗು ಪುಣ್ಯ ತೀರ್ಥಗಳ ಸೃಷ್ಟಿ ಮಾಡಿದ. ಗಂಗೆ ಕಾವೇರಿಯಂತಹ ಪವಿತ್ರ ತೀರ್ಥದಲ್ಲಿ ಸ್ನಾನ ಮಾಡುವುದರಿಂದ ನಮ್ಮ ಮನಸ್ಸಿನ ಕಲ್ಮಶ ಹೊರಟು ಹೋಗಿ ಮನಸ್ಸು ಭಗವಂತನೆಡೆಗೆ ಹರಿಯುತ್ತದೆ. ಶಾಸ್ತ್ರಗಳನ್ನೂ ಕೂಡಾ ತೀರ್ಥ ಎಂದು ಕರೆಯುತ್ತಾರೆ. ಸ್ವಚ್ಚ ಮನಸ್ಸಿನಿಂದ ಓದಲು ಶಾಸ್ತ್ರಗಳ ನಿರ್ಮಾಣ ಕೂಡಾ ಭಗವಂತನ ಸೃಷ್ಟಿ. ಇದರಿಂದ ಮನಸ್ಸಿಗೆ ವೇಗ ಸಿಗುತ್ತದೆ. ಹೀಗೆ ಪವಿತ್ರ ತೀರ್ಥಗಳ, ಶಾಸ್ತ್ರಗಳ ಸೃಷ್ಟಿ ಮಾಡಿದ ಭಗವಂತ ತೀರ್ಥಕರಃ
696) ವಸುರೇತಾಃ
'ವಸುಗಳು' ಎಂದರೆ ದೇವತೆಗಳು. ಎಲ್ಲಾ ದೇವತೆಗಳ ಸೃಷ್ಟಿಗೆ ಕಾರಣ ಪುರುಷನಾದ ಭಗವಂತ ವಸುರೇತಾಃ.
697) ವಸುಪ್ರದಃಮೋಕ್ಷವೆಂಬ ಸಿರಿಯನ್ನೀಯುವವ. ನಾವು ದಾರಿತಪ್ಪಿದಾಗ ಎಲ್ಲವನ್ನೂ ಕಸಿದುಕೊಳ್ಳುವವನು. (ಏಕೆಂದರೆ ದೇವರ ಸಾಮ್ರಾಜ್ಯದಲ್ಲಿ ತಪ್ಪಿಗೆ ಸಜೆ ತಪ್ಪಿದ್ದಲ್ಲ)
No comments:
Post a Comment